Blog

ಸಮಗ್ರ ಬೆಳೆ ಬೆಳೆಯುವುದರಿಂದ ರೈತರಿಗೆ ಸಾಕಷ್ಟು ಅನುಕೂಲಗಳಿವೆ. ಹಲವು ಬೆಳೆ ಬೆಳೆಯುವುದರಿಂದ, ಒಂದು ಬೆಳೆಯಲ್ಲಿ ನಷ್ಟವಾದರೂ, ಮತ್ತೊಂದು ಬೆಳೆ ಕೈ ಹಿಡಿಯುತ್ತದೆ. ಮತ್ತೊಂದೆಡೆ ನಿರಂತರ ಆದಾಯಕ್ಕೂ ಕಾರಣವಾಗುತ್ತದೆ.

 ಇನ್ನು ಕಡಿಮೆ ಭೂಮಿ ಹೊಂದಿರುವ ರೈತರು, ಇಷ್ಟು ಭೂಮಿಯಲ್ಲಿ ವಿವಿಧ ಬೆಳೆ ಬೆಳೆಯುವುದರಿಂದ ಹೆಚ್ಚಿನ ಇಳುವರಿ ಸಿಗುವುದಿಲ್ಲ ಎಂದು ಭಾವಿಸಿರುತ್ತಾರೆ. ಆದ್ರೆ ಅಂತರ ಬೆಳೆ ಬೆಳೆದಾಗಲೇ ಇನ್ನು ಹೆಚ್ಚು ಇಳುವರಿ ಪಡೆಯಬಹುದು ಎಂಬುದು ಸತ್ಯ.

 ಸಮಗ್ರ ಬೆಳೆ ನಿರ್ವಹಣೆ:

 ಸಾವಯವ ಕೃಷಿಯಲ್ಲಿ ಸಮಗ್ರ ಬೆಳೆ ನಿರ್ವಹಣೆ ಮಾಡಿದರೆ, ರೈತರಿಗೆ ಹೆಚ್ಚು ಲಾಭ. ಯಾಕಂದ್ರೆ ಇಲ್ಲಿ ಖರ್ಚು ಕಡಿಮೆಯಾಗುತ್ತೆ, ರೋಗ ಮತ್ತು ಕೀಟ ಬಾಧೆ ನಿಯಂತ್ರಣದಲ್ಲಿರುತ್ತದೆ. ಅಷ್ಟೆ ಅಲ್ಲ ಸಮಗ್ರ ಪೋಷಕಾಂಶಗಳು, ಬೆಳೆಗಳಿಗೆ ಸರಳವಾಗಿ ದೊರೆಯುತ್ತದೆ. ಭೂಮಿ ಮತ್ತಷ್ಟು ಫಲವತ್ತಾಗುತ್ತದೆ.

 

ಕೀಟ ಮತ್ತು ರೋಗ ಬಾಧೆ:

ಸಾವಯವ ಕೃಷಿಯಲ್ಲಿ ಕೀಟ ಮತ್ತು ರೋಗ ಬಾಧೆಯನ್ನ ಕಡಿಮೆ ಖರ್ಚಿನಲ್ಲಿ ನಿಯಂತ್ರಿಸಬಹುದು. ಇದರಿಂದ ಕೃಷಿ ಭೂಮಿ ತನ್ನ ಫಲವತ್ತತೆ ಕಳೆದುಕೊಳ್ಳುವುದಿಲ್ಲ. ಜತೆಗೆ ಬೆಳೆಗಳ ರೋಗ ನಿರೋಧಕ ಶಕ್ತಿಗೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಹೀಗಾಗಿ ಸರಳವಾಗಿ ಸಾವಯವ ಕೃಷಿಯಲ್ಲಿ ಸಮಗ್ರ ಬೆಳೆಗಳನ್ನ ಕಾಪಾಡಿಕೊಳ್ಳಬಹುದು.

ಒಟ್ಟಾರೆಯಾಗಿ ಕೃಷಿಯಲ್ಲಿ ಕೃಷಿಕರು, ಏಕ ಬೆಳೆ ಪದ್ಧತಿಗೆ ದುಂಬಾಲು ಬೀಳದೆ, ಸಮಗ್ರ ಸಾವಯವ ಕೃಷಿಯತ್ತ  ತಮ್ಮ ಚಿತ್ತ ಹರಸಿದರೆ, ಆರ್ಥಿಕವಾಗಿ ಸದೃಢರಾಗುವುದು ನಿಶ್ಚಿತ.

 ವರದಿ: ಶ್ವೇತಾ ಕಲಕಣಿ

 

 ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

 https://www.youtube.com/watch?v=glToEHYtTZA


 



Blog




Home    |   About Us    |   Contact    |   
microbi.tv | Powered by Ocat Business Promotion Service in India