Blog

ಹಾವೇರಿ: ಕೃಷಿ ಭೂಮಿ ಕಡಿಮೆ ಇದ್ದರೆ, ರೈತರು ಹೆಚ್ಚು ಆದಾಯ ಪಡೆಯೋಕೆ ಸಾಧ್ಯವಿಲ್ಲ ಎಂಬ ಮಾತಿಗೆ ಟಕ್ಕರ್ ಕೊಟ್ಟಿದ್ದಾರೆ ಈ ಸಾವಯವ ಕೃಷಿಕ. ಕೇವಲ 15 ಗುಂಟೆ ಕೃಷಿ ಭೂಮಿಯಲ್ಲಿ ಸಧ್ಯ 4 ಲಕ್ಷ ರೂ. ಆದಾಯ ಪಡೆಯುತ್ತಿರುವ ಇವರ ಸಾಧನೆ ಎಲ್ಲಾ ಕೃಷಿಕರಿಗೆ ಮಾದರಿಯಾಗಿದೆ.

ಒಟ್ಟಾರೆ 20 ಗುಂಟೆ ಕೃಷಿ ಭೂಮಿಯನ್ನು ಹೊಂದಿರುವ ರೈತ, 15 ಗುಂಟೆಯಲ್ಲಿ ವೀಳ್ಯದೆಲೆಯನ್ನು ಬೆಳೆಯುತ್ತಿದ್ದಾರೆ. ಎಲೆಬಳ್ಳಿಯಲ್ಲಿ ವರ್ಷಕ್ಕೆ 4 ಲಕ್ಷ ರೂ. ಆದಾಯವನ್ನು ಪಡೆಯುತ್ತಿದ್ದು, ಸಾವಯವ ಕೃಷಿ ಪದ್ಧತಿಯಲ್ಲಿ ನಿರ್ವಹಣೆ ಮಾಡುತ್ತಿದ್ದಾರೆ. ಯಾವುದೇ ರಾಸಾಯನಿಕ ಗೊಬ್ಬರ ಬಳಸದೆ ಸಾವಯವ ಕೃಷಿಯಲ್ಲಿ ಡಾ.ಸಾಯಿಲ್ ಜೈವಿಕ ಗೊಬ್ಬರ, ಕೊಟ್ಟಿಗೆ ಗೊಬ್ಬರ ಬಳಸುತ್ತಿದ್ದು, 50 ಸಾವಿರ ಖರ್ಚು ಮಾಡಿ 4 ಲಕ್ಷ ಆದಾಯ ಪಡೆಯುತ್ತಿದ್ದಾರೆ. ಈ ಬಗ್ಗೆ ಕೃಷಿಕ ಮೈಕ್ರೋಬಿ ಟಿವಿಯೊಂದಿಗೆ ಮಾತನಾಡಿದ್ದಾರೆ.

https://www.youtube.com/watch?v=sHZxdJtR-QA&t=13s

 

ಕೃಷಿಕರು ಬೆಳೆಗಳಲ್ಲಿ ಲಾಭ ಪಡೆಯಬೇಕು, ಕೃಷಿ ಭೂಮಿ ಫಲವತ್ತತೆಯಿಂದ ಇರಬೇಕು, ಖರ್ಚು ಕಡಿಮೆ ಮಾಡಬೇಕು ಎಂದರೆ ಸಾವಯವ ಕೃಷಿ ಮಾಡಲೇಬೇಕು ಎಂದು ಹೇಳುತ್ತಾರೆ ಸಾವಯವ ಕೃಷಿಕ ಜಮಾಲ್ ಸಾಬ್. ಇವರು ಸತತ 8 ವರ್ಷದಿಂದ ಸಾವಯವ ಕೃಷಿಯನ್ನೇ ಮಾಡುತ್ತಾ ಯಶಸ್ಸುಗಳಿಸಿದ್ದಾರೆ.

ಸಾವಯವ ಕೃಷಿ ಮಾಹಿತಿಗಾಗಿ ಸಂಪರ್ಕಿಸಿ 9099262233

ನಿಮ್ಮ ಮಣ್ಣಿನ ಉಚಿತ ಪರೀಕ್ಷೆಗಾಗಿ ಧಾತು ಆಪ್ ಡೌನ್ ಲೋಡ್ ಗೆ ಕೆಳಕಂಡ ಲಿಂಕ್ ಕ್ಲಿಕ್ ಮಾಡಿ:

https://play.google.com/store/apps/details?id=com.microbitech.dhatu&fbclid=IwAR3G5jmGg24xxo4UjIhbtT9krNmE3ukRkTHAiR_Vui0v7tsCnQli6ZP7-fE

 Microbi Agrotech Website: http://www.microbiagro.com

 Subscribe to Microbi Agrotech: https://youtube.com/c/MICROBIAGROTECHPVTLTDKANNADA

 Like us on Facebook: https://www.facebook.com/microbiagrotech/

ವರದಿ: ವನಿತಾ ಪರಸನ್ನವರ್

 




Blog




Home    |   About Us    |   Contact    |   
microbi.tv | Powered by Ocat Business Promotion Service in India